
ಇಂದು ರಥ ಸಪ್ತಮಿ...
ಓಂ ಭದ್ರಂ ಕರ್ಣೇಭಿಶೃಣುಯಾಮ ದೇವಾ:|
ಭದ್ರಂ ಪಶ್ಯೇಮಾಕ್ಷಭಿರ್ಯಜತ್ರಾ:|
ಸ್ಥಿರೈರಂಗೈಸ್ತುಷ್ಟುವಾಗ್ಂಸಸ್ತನೂಭಿ:|
ವ್ಯಶೇಮ ದೇವಹಿತಂ ಯದಾಯು:|
ಸ್ವಸ್ತಿ ನ ಇಂದ್ರೋ ವೃದ್ಧಶ್ರವಾ:|
ಸ್ವಸ್ತಿ ನ: ಪೂಷಾ ವಿಶ್ವವೇದಾ:|
ಸ್ವಸ್ತಿನಸ್ತಾರ್ಕ್ಷ್ಯೋ ಅರಿಷ್ಟನೇಮಿ:|
ಸ್ವಸ್ತಿನೋ ಬೃಹಸ್ಪತಿರ್ದಧಾತು|
ಓಂ ಶಾಂತಿ: ಶಾಂತಿ: ಶಾಂತಿ:||
ಮಾರ್ಗಶೀರ್ಷ ಮಾಸ ಶುಕ್ಲಪಕ್ಷದ ಏಳನೆಯದಿನ.
ಜಗತ್ತಿನ ಮುಂದುವರಿಕೆಗೆ ಚಾಲಕನಾದ
ಶ್ರೀ ಸೂರ್ಯ ಭಗವಾನನು ಸಿಂಹ ರಾಶಿಯಿಂದ
ಮಕರ ರಾಶಿಗೆ ತನ್ನ ರಥವನ್ನೇರಿ ಹೋಗುತ್ತಾನೆ. ಅಂದರೆ ಇಂದಿಗೆ ಛಳಿಗಾಲವು ಮುಗಿದು ಬೇಸಗೆಯ ಕಾಲವು ಪ್ರಾರಂಭವಾಗುವುದು.
ಸೂರ್ಯನು ತನ್ನ ಏಳು ಕುದುರೆಗಳ ರಥವನ್ನೇರುವನು.
ಅವನ ರಥದ ಸಾರಥಿ ಅರುಣ.
ಇಂದು ವೇದ ಮಂತ್ರಗಳ ಭಾಗವಾದ ಕೃಷ್ಣ ಯಜುರ್ವೇದ ತೈತ್ತಿರೀಯಾರಣ್ಯಕದಲ್ಲಿ
ಪ್ರಸ್ತಾಪಿಸಿರುವ ಅರುಣಪ್ರಶ್ನ ರೀತ್ಯಾ ಸೂರ್ಯ
ನಮಸ್ಕಾರಗಳನ್ನು ಮಾಡುವುದು ಪದ್ಧತಿ.
ಸೂರ್ಯನ ರಥಕ್ಕೆ ಏಳು ಕುದುರೆಗಳು.
ಅವುಗಳ ಹೆಸರುಗಳು ಗಾಯತ್ರಿ,
ಬೃಹತೀ, ಉಷ್ಣಿಕ್, ಜಗತೀ, ತ್ರಿಷ್ಟುಪ್,
ಅನುಷ್ಟುಪ್ ಮತ್ತು ಪಂಕ್ತಿ.
ಬೆಳಗಿನ ಜಾವದಲ್ಲಿ ತಲೆ, ಭುಜ, ಕತ್ತು,
ಕಂಕುಳು, ತೊಡೆ, ಪಾದ ಇತ್ಯಾದಿಗಳ
ಮೇಲೆ ಎಕ್ಕದ ಎಲೆಯನ್ನು ಇಟ್ಟುಕೊಂಡು
ಸ್ನಾನ ಮಾಡಿ, ಪೂರ್ವಾಭಿಮುಖವಾಗಿ
ಸೂರ್ಯನಿಗೆ ನಮಸ್ಕರಿಸುವುದು
ರೂಢಿಯಲ್ಲಿದೆ. ಸೂರ್ಯನ ೧೦೮ ಹೆಸರುಗಳನ್ನು ಉಚ್ಚರಿಸಿ ನಮಸ್ಕಾರಗಳನ್ನು ಮಾಡುವರು.
ಮನೆಯ ಒಂದು ಕೋಣೆಯಲ್ಲಿ ಪೂರ್ಣವಾಗಿ
ಒಂದು ಸುತ್ತು ಪ್ರದಕ್ಷಿಣೆ ಹಾಕುತ್ತಾ ಅರುಣ ಪ್ರಶ್ನದ ಮಂತ್ರ ಪಠಿಸಿ ನಮಸ್ಕಾರ ಮಾಡುವರು.
ಹೀಗೆ ೧೦೮ ನಮಸ್ಕಾರಗಳನ್ನು ಮಾಡುವರು.
೧೦೮ ಆಗದಿದ್ದವರು ೧೨ ನಾಮಗಳನ್ನು ಜಪಿಸಿ
ನಮಸ್ಕಾರ ಮಾಡುವರು.
ಅವಾವುದೆಂದರೆ ಇಂದ್ರ, ಧಾತ, ಪರ್ಜನ್ಯ, ತ್ವಷ್ಟ,
ಪುಷ, ಆರ್ಯಮ, ಭಾಗ, ವಿವಸ್ವನ, ವಿಷ್ಣು,
ಅಂಶುಮಾನ, ವರುಣ ಮತ್ತು ಮಿತ್ರ. ಈ ಹನ್ನೆರಡು
ಹೆಸರುಗಳು ಹನ್ನೆರಡು ತಿಂಗಳುಗಳ ಸೂಚಕ.
ಇದೇ ತರಹ ಸೂರ್ಯನಿಗೆ ಇನ್ನೂ ಹನ್ನೆರಡು
ಹೆಸರುಗಳಿವೆ. ಅವುಗಳು ಯಾವುವೆಂದರೆ,
ಆದಿತ್ಯ, ಸವಿತಾ, ಸೂರ್ಯ, ಮಿಹಿರ, ಅರ್ಕ,
ಪ್ರಭಾಕರ, ಮಾರ್ತಾಂಡ, ಭಾಸ್ಕರ, ಭಾನು,
ಚಿತ್ರಭಾನು, ದಿವಾಕರ ಮತ್ತು ರವಿ. ೧೨ ಜನ ಋತ್ವಿಕರನ್ನು ಮನೆಗೆ ಕರೆಯಿಸಿ ನಮಸ್ಕಾರ ಮಾಡಿಸುವುದೂ ರೂಢಿಯಲ್ಲಿದೆ.
ಆ ಹನ್ನೆರಡು ಜನ ಋತ್ವಿಕರ ಅರುಣ ಪ್ರಶ್ನ್ಯ
ರೀತ್ಯಾ ಒಂದು ನಮಸ್ಕಾರವನ್ನು ೧೨ ಎಂದು
ಲೆಕ್ಕಕ್ಕೆ ತೆಗೆದುಕೊಳ್ಳುವರು. ಆ ಸಂದರ್ಭದಲ್ಲಿ ಸೂರ್ಯನಿಗೆ ಪ್ರಿಯವಾದ ರವೆಯ ಪಾಯಸವನ್ನು
ನೈವೇದ್ಯಕ್ಕಿರಿಸಿ,
ಅದನ್ನು ಪ್ರಸಾದವಾಗಿ ಋತ್ವಿಕರಿಗೆ ಕೊಡುವರು
ಮತ್ತು ಇತರರೂ ಸೇವಿಸುವರು.
#vishwaguru
posted from Bloggeroid
No comments:
Post a Comment